25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya
error: Content is protected !!