22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!