22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಿಕಾ ಭವನದಲ್ಲಿ ಜ. 04 ರಂದು ನಡೆಯಿತು.

ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿಯಾಗಿ ತುಕರಾಮ್ ಬಿ, ಉಪಾಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಜತೆ ಕಾರ್ಯದರ್ಶಿಯಾಗಿ ಧನಕೀರ್ತಿ ಆರಿಗ ಧರ್ಮಸ್ಥಳ ಅವರು ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಕಾರ್ಯದರ್ಶಿ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು.ವೇದಿಕೆಯಲ್ಲಿ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ, ಜತೆ ಕಾರ್ಯದರ್ಶಿ ಮನೋಹರ್ ಬಳಂಜ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಇದ್ದರು.


ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು‌ ಸಂಘದ ಹಿರಿಯ ಸದಸ್ಯ, ಆರ್.ಎನ್. ಪೂವಣಿ ನಡೆಸಿಕೊಟ್ಟರು. ನಂತರ ನಡೆದ ಕಾರ್ಯಕ್ರಮದಲ್ಲಿ ಚೈತ್ರೇಶ್ ಇಳಂತಿಲ ಹಾಗೂ ಪದಾಧಿಕಾರಿಗಳು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಬಿ.ಎಸ್ ಕುಲಾಲ್, ಮಂಜುನಾಥ ರೈ, ದೀಪಕ್ ಅಠವಳೆ, ಅಚ್ಚುಶ್ರೀ ಬಾಂಗೇರು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya
error: Content is protected !!