22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಂತ್ಯದ ನೇತ್ರತ್ವದಲ್ಲಿ ಜ. 03 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗಣ್ಯ ವ್ಯಕ್ತಿಗಳನ್ನು ,ವಿವಿಧ ಸಂಘ ಸಂಸ್ಥೆಗಳ ನಾಯಕರನ್ನು ಹಾಗೂ ಧರ್ಮಪ್ರಾಂತ್ಯದ ವಿವಿಧ ಕಾರ್ಯಗಳಿಗೆ ಸಹಕರಿಸುತ್ತಿರುವರನ್ನು ಕರೆದು ಪ್ರತಿವರ್ಷದಂತೆ ಈ ವರ್ಷ ಕೂಡಾ ಸೌಹಾರ್ದ ಕೂಟವನ್ನು ಏರ್ಪಡಿಸಲಾಗಿದೆ.

‘ಸಾಮಾಜಿಕ ಭಾವೈಕ್ಯತೆ ಕಾಪಾಡುವಲ್ಲಿ ನಮ್ಮ ಪಾತ್ರ’ ಎನ್ನುವ ವಿಷಯದ ಕುರಿತು ಮುಖ್ಯ ಸಂದೇಶವನ್ನು ಡಾ. ಟಿ. ಕೃಷ್ಣಮೂರ್ತಿ ನೀಡಿದರು. ಕಾರ್ಯಕ್ರಮದ ಆಶಯದ ಕುರಿತು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರು ವಿವರಿಸಿ ಸ್ವಾಗತಿಸಿದರು.

ಹೊಸವರ್ಷದ ಹಾಗೂ ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಫ್ರಥ್ವಿ ಸಾನಿಕಂ ಇವರ ನೇತ್ರತ್ವದಲ್ಲಿ ತಾಲೂಕಿನ ವಿವಿಧ ಗಣ್ಯ ವ್ಯಕ್ತಿಗಳು ಜೊತೆ ಸೇರಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಅವರು ವಿತರಿಸಿದರು. ಹೊಸ ವರ್ಷದ ಅದೃಷ್ಟ ವ್ಯಕ್ತಿಯನ್ನು ಚೀಟಿ ತೆಗೆಯುವ ಮೂಲಕ ಆಯ್ಕೆಮಾಡಿ ಬಹುಮಾನವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರೀಯ ಅಗ್ನೆಸ್ ಚಾಕೋ , ಬೆಳ್ತಂಗಡಿ ತಾಲೂಕು ಕಾಮಾಗಾರಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು, ಪಟ್ಟಣ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ನ ವಿವಿಧ ಗಣ್ಯ ವ್ಯಕ್ತಿಗಳು, ಮಾದ್ಯಮ ಮಿತ್ರರು, ಸೌಹಾರ್ದ ವೇದಿಕೆಯ ವಿವಿಧ ಗಣ್ಯ ವ್ಯಕ್ತಿಗಳು, ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ಅನೇಕ ವಿಶಿಷ್ಟ ಆಹ್ವಾನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾರಿಯಾಂಬಿಕ ಆಂಗ್ಲ ಮಾದ್ಯಮ ಶಾಲೆ ಬಂಗಾಡಿ ಇಲ್ಲಿನ ವಿದ್ಯಾರ್ಥಿನಿಯರು ಸ್ವಾಗತ ನೃತ್ಯವನ್ನು ಮಾಡಿದರು. ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ಟೋಲೇಟ್ ಇದರ ನಿರ್ದೇಶಕರಾದ ವಂದನಿಯ ಫಾದರ್ ಥೋಮಸ್ ಪುಲ್ಲಾಟ್ ಇವರು ಪಾರ್ಥನೆಯನ್ನು ನೆರವೇರಿಸಿದರು. ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂದನಿಯ ಫಾದರ್ ಜೋಸೆಫ್ ವಲಿಯ ಪರಂಬಿಲ್ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಡಿ.ಕೆ. ಆರ್. ಡಿ.ಎಸ್ ನಿರ್ದೇಶಕರಾದ ವಂದನಿಯ ಫಾದರ್ ಬಿನೋಯಿ .ಏ. ಜೆ ಹಾಗೂ ಡಿ.ಕೆ. ಆರ್. ಡಿ.ಎಸ್ ನ ಸಿಬ್ಬಂದಿಯಾದ ಶ್ರೀಮತಿ ಸಿಸಿಲೀಯಾ ನೆರವೇರಿಸಿದರು.

Related posts

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya
error: Content is protected !!