July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತುಂಬಿಸಿ‌ ಎಸೆದು ಹೋಗಿರುವ ಘಟನೆ ಡಿ.17 ರಂದು ನಡೆದಿದ್ದು. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಜ.4 ರಂದು ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಆದಂ ಮಗ ಮಹಮ್ಮದ್ ಇರ್ಷಾದ್ (28) ಮತ್ತು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬದ ಸುನ್ನತ್ ಕೆರೆ ನಿವಾಸಿ ರವೂಫ್.ಎಂ.ಇಬ್ರಾಹಿಂ ಮಗ ಮಹಮ್ಮದ್ ಅಜ್ಮಲ್(30) ಬಂಧಿತ ಆರೋಪಿಗಳು.ಆರೋಪಿಗಳನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು.ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya
error: Content is protected !!