24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ಗಳ ಬಹುಮಾನ ವಿತರಣಾ ಕಾರ್ಯಕ್ರಮ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಗಿರಿಜಾ ಮತ್ತು ಶ್ರೀಮತಿ ಮನೋರಮಾ ಇವರು ಭಾಗವಹಿಸಿದ್ದರು.
ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಶ್ರೀಮತಿ ಗಿರಿಜಾರವರು ಸ್ಪರ್ಧೆಗಳಲ್ಲಿ ಬಹುಮಾನ ಮುಖ್ಯವಲ್ಲ. ಪ್ರತಿಯೊಂದು ಸ್ಪರ್ಧೆಗಳಲ್ಲಿಯೂ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


ಶ್ರೀಮತಿ ಮನೋರಮಾ ಮಾತನಾಡುತ್ತಾ ಪುಸ್ತಕಗಳು ಒಳ್ಳೆಯ ಮಿತ್ರರಿದ್ದಂತೆ. ಹೆಚ್ಚು ಪುಸ್ತಕಗಳನ್ನು ಓದಿ ಹೆಚ್ಚು ಜ್ಞಾನವನ್ನು ಗಳಿಸಿಕೊಳ್ಳಿ. ಎನ್ನುತ್ತಾ ಪುರಾಣ ಕಥೆಯಾದ ಏಕಲವ್ಯನ ಕಥೆಯನ್ನು ಮಕ್ಕಳಿಗೆ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದರು.
ಬಹುಮಾನಗಳ ಪಟ್ಟಿಯನ್ನು ಶ್ರೀಮತಿ ಕಾವ್ಯ, ಶ್ರೀಮತಿ ಉಷಾ, ಶ್ರೀಮತಿ ಪೂರ್ಣಿಮಾ ಕೆ.ಎಂ, ಶ್ರೀಮತಿ ನಿಖಿಲ ಡಿ. ಶ್ರೀಮತಿ ರಾಜೇಶ್ವರಿ ಬಿ. ಪಿ ವಾಚಿಸಿದರು.


ವಿದ್ಯಾರ್ಥಿಗಳಿಂದ ಪ್ರಾರ್ಥಿಸಿ, ಶೇಖರ್ ಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ನಿರೂಪಿಸಿದರು. ಶ್ರೀಮತಿ ಕೇಶವತಿ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya
error: Content is protected !!