23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ಗಳ ಬಹುಮಾನ ವಿತರಣಾ ಕಾರ್ಯಕ್ರಮ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಗಿರಿಜಾ ಮತ್ತು ಶ್ರೀಮತಿ ಮನೋರಮಾ ಇವರು ಭಾಗವಹಿಸಿದ್ದರು.
ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಶ್ರೀಮತಿ ಗಿರಿಜಾರವರು ಸ್ಪರ್ಧೆಗಳಲ್ಲಿ ಬಹುಮಾನ ಮುಖ್ಯವಲ್ಲ. ಪ್ರತಿಯೊಂದು ಸ್ಪರ್ಧೆಗಳಲ್ಲಿಯೂ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


ಶ್ರೀಮತಿ ಮನೋರಮಾ ಮಾತನಾಡುತ್ತಾ ಪುಸ್ತಕಗಳು ಒಳ್ಳೆಯ ಮಿತ್ರರಿದ್ದಂತೆ. ಹೆಚ್ಚು ಪುಸ್ತಕಗಳನ್ನು ಓದಿ ಹೆಚ್ಚು ಜ್ಞಾನವನ್ನು ಗಳಿಸಿಕೊಳ್ಳಿ. ಎನ್ನುತ್ತಾ ಪುರಾಣ ಕಥೆಯಾದ ಏಕಲವ್ಯನ ಕಥೆಯನ್ನು ಮಕ್ಕಳಿಗೆ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದರು.
ಬಹುಮಾನಗಳ ಪಟ್ಟಿಯನ್ನು ಶ್ರೀಮತಿ ಕಾವ್ಯ, ಶ್ರೀಮತಿ ಉಷಾ, ಶ್ರೀಮತಿ ಪೂರ್ಣಿಮಾ ಕೆ.ಎಂ, ಶ್ರೀಮತಿ ನಿಖಿಲ ಡಿ. ಶ್ರೀಮತಿ ರಾಜೇಶ್ವರಿ ಬಿ. ಪಿ ವಾಚಿಸಿದರು.


ವಿದ್ಯಾರ್ಥಿಗಳಿಂದ ಪ್ರಾರ್ಥಿಸಿ, ಶೇಖರ್ ಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ನಿರೂಪಿಸಿದರು. ಶ್ರೀಮತಿ ಕೇಶವತಿ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!