September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!