July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ.


ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಸಂಜೀವ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಿತಿಯ ಜಿಲ್ಲಾ ಪ್ರತಿನಿಧಿಯಾಗಿ ಮಹಾವೀರ ಜೈನ್ ನಾರಾವಿ, ತಾಲೂಕು ಸಮಿತಿ ಉಪಾಧ್ಯಕ್ಷರಾಗಿ ವಿನಯ ಕುಮಾರ್ ಹೆಗ್ಡೆ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ನಡ ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಬೊಳಿಯಂಜಿ, ಕೋಶಾಧಿಕಾರಿಯಾಗಿ ದಿನೇಶ್ ಗೌಡ ಪೊಸಂದೋಡಿ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು, ಸದಾನಂದ ಪೂಜಾರಿ ಉಂಗಿಲಬೈಲು ಅಳದಂಗಡಿ, ಸಂಜೀವ ಶೆಟ್ಟಿ ಪೆರಾಡಿ, ಜಿನೇಂದ್ರ ಕುಮಾರ್ ನಾರಾವಿ, ಎಂ. ವಿಜಯ ಕುಮಾರ್ ಮರೋಡಿ, ನಿತ್ಯಾನಂದ ರೈ ಕಳೆಂಜ ಕಾಯರ್ತಡ್ಕ, ಜಗದೀಶ್ ಹೆಗ್ಡೆ ನಾರಾವಿ, ಸುರೇಖ ಭಂಡಾರಿ ನಾರಾವಿ, ನಿತ್ಯಾನಂದ ಪೂಜಾರಿ ಕುತ್ಲೂರು, ವಸಂತ ಕೋಟ್ಯಾನ್ ಕಾಶಿಪಟ್ಣ, ಸಂಜೀವ ಶೆಟ್ಟಿ ಉಜಿರೆ ಆಯ್ಕೆಯಾದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!