23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಿಕಾ ಭವನದಲ್ಲಿ ಜ. 04 ರಂದು ನಡೆಯಿತು.

ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿಯಾಗಿ ತುಕರಾಮ್ ಬಿ, ಉಪಾಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಜತೆ ಕಾರ್ಯದರ್ಶಿಯಾಗಿ ಧನಕೀರ್ತಿ ಆರಿಗ ಧರ್ಮಸ್ಥಳ ಅವರು ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಕಾರ್ಯದರ್ಶಿ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು.ವೇದಿಕೆಯಲ್ಲಿ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ, ಜತೆ ಕಾರ್ಯದರ್ಶಿ ಮನೋಹರ್ ಬಳಂಜ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಇದ್ದರು.


ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು‌ ಸಂಘದ ಹಿರಿಯ ಸದಸ್ಯ, ಆರ್.ಎನ್. ಪೂವಣಿ ನಡೆಸಿಕೊಟ್ಟರು. ನಂತರ ನಡೆದ ಕಾರ್ಯಕ್ರಮದಲ್ಲಿ ಚೈತ್ರೇಶ್ ಇಳಂತಿಲ ಹಾಗೂ ಪದಾಧಿಕಾರಿಗಳು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಬಿ.ಎಸ್ ಕುಲಾಲ್, ಮಂಜುನಾಥ ರೈ, ದೀಪಕ್ ಅಠವಳೆ, ಅಚ್ಚುಶ್ರೀ ಬಾಂಗೇರು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya
error: Content is protected !!