July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ


ಅರಸಿನಮಕ್ಕಿ: ಹತ್ಯಡ್ಕ ಸಹಕಾರಿ ಸಂಘದ ಚುನಾವಣೆಯು ಜ.8ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಮನೆ ಮನೆ ಪ್ರಚಾರದ ‘ಮಹಾಭಿಯಾನ’ಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಜ. 5ರಂದು ಚಾಲನೆ ನೀಡಿದರು.

ವೇದಿಕೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರಾಘವೇಂದ್ರ ನಾಯಕ್, ರಾಜು ಕೆ.ಸಾಲ್ಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ , ಮುರಳಿಧರ ಶೆಟ್ಟಿಗಾರ್, ಬೇಬಿ ಕಿರಣ್, ಕೃಷ್ಣಪ್ಪ ಗೌಡ, ಶ್ರೀಮತಿ ತಾರಾ ಚಿಪ್ಲುನ್ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್, ಶಿಶಿಲ ಗ್ರಾಪಂ ಅಧ್ಯಕ್ಷ ಸುದಿನ್ ಕೆ., ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಗಣೇಶ್ ಅರಸಿನಮಕ್ಕಿ,ಜಯಪ್ರಕಾಶ, ವಿನಯಚಂದ್ರ ಟಿ. ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಮಹಾಭಿಯಾನ’ದ ಪ್ರಚಾರದ ತಂಡಕ್ಕೆ ಬೇಕಾದ ವಿವಿಧ ವಸ್ತುಗಳನ್ನು ಕರುಣಾಕರ ಶಿಶಿಲರ ವರಿಗೆ ಸಾಂಕೇತಿಕವಾಗಿ ನೀಡಲಾಯಿತು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.’ಮಹಾಭಿಯಾನ’ದ ಪ್ರಯುಕ್ತ ಅರಸಿನಮಕ್ಕಿ, ರೆಖ್ಯಾ, ಶಿಶಿಲ, ಶಿಬಾಜೆಯಲ್ಲಿ ತಂಡ ತಂಡವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ. ರಾಘವೇಂದ್ರ ನಾಯಕ್ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ರತೀಶ್ ಗೌಡ ವಂದಿಸಿದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!