September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ


ಅರಸಿನಮಕ್ಕಿ: ಹತ್ಯಡ್ಕ ಸಹಕಾರಿ ಸಂಘದ ಚುನಾವಣೆಯು ಜ.8ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಮನೆ ಮನೆ ಪ್ರಚಾರದ ‘ಮಹಾಭಿಯಾನ’ಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಜ. 5ರಂದು ಚಾಲನೆ ನೀಡಿದರು.

ವೇದಿಕೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರಾಘವೇಂದ್ರ ನಾಯಕ್, ರಾಜು ಕೆ.ಸಾಲ್ಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ , ಮುರಳಿಧರ ಶೆಟ್ಟಿಗಾರ್, ಬೇಬಿ ಕಿರಣ್, ಕೃಷ್ಣಪ್ಪ ಗೌಡ, ಶ್ರೀಮತಿ ತಾರಾ ಚಿಪ್ಲುನ್ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್, ಶಿಶಿಲ ಗ್ರಾಪಂ ಅಧ್ಯಕ್ಷ ಸುದಿನ್ ಕೆ., ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಗಣೇಶ್ ಅರಸಿನಮಕ್ಕಿ,ಜಯಪ್ರಕಾಶ, ವಿನಯಚಂದ್ರ ಟಿ. ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಮಹಾಭಿಯಾನ’ದ ಪ್ರಚಾರದ ತಂಡಕ್ಕೆ ಬೇಕಾದ ವಿವಿಧ ವಸ್ತುಗಳನ್ನು ಕರುಣಾಕರ ಶಿಶಿಲರ ವರಿಗೆ ಸಾಂಕೇತಿಕವಾಗಿ ನೀಡಲಾಯಿತು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.’ಮಹಾಭಿಯಾನ’ದ ಪ್ರಯುಕ್ತ ಅರಸಿನಮಕ್ಕಿ, ರೆಖ್ಯಾ, ಶಿಶಿಲ, ಶಿಬಾಜೆಯಲ್ಲಿ ತಂಡ ತಂಡವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ. ರಾಘವೇಂದ್ರ ನಾಯಕ್ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ರತೀಶ್ ಗೌಡ ವಂದಿಸಿದರು.

Related posts

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನ – ಉಪನ್ಯಾಸ ಕಾರ್ಯಕ್ರಮ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!