30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ


ಅರಸಿನಮಕ್ಕಿ: ಹತ್ಯಡ್ಕ ಸಹಕಾರಿ ಸಂಘದ ಚುನಾವಣೆಯು ಜ.8ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಮನೆ ಮನೆ ಪ್ರಚಾರದ ‘ಮಹಾಭಿಯಾನ’ಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಜ. 5ರಂದು ಚಾಲನೆ ನೀಡಿದರು.

ವೇದಿಕೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರಾಘವೇಂದ್ರ ನಾಯಕ್, ರಾಜು ಕೆ.ಸಾಲ್ಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ , ಮುರಳಿಧರ ಶೆಟ್ಟಿಗಾರ್, ಬೇಬಿ ಕಿರಣ್, ಕೃಷ್ಣಪ್ಪ ಗೌಡ, ಶ್ರೀಮತಿ ತಾರಾ ಚಿಪ್ಲುನ್ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್, ಶಿಶಿಲ ಗ್ರಾಪಂ ಅಧ್ಯಕ್ಷ ಸುದಿನ್ ಕೆ., ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಗಣೇಶ್ ಅರಸಿನಮಕ್ಕಿ,ಜಯಪ್ರಕಾಶ, ವಿನಯಚಂದ್ರ ಟಿ. ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಮಹಾಭಿಯಾನ’ದ ಪ್ರಚಾರದ ತಂಡಕ್ಕೆ ಬೇಕಾದ ವಿವಿಧ ವಸ್ತುಗಳನ್ನು ಕರುಣಾಕರ ಶಿಶಿಲರ ವರಿಗೆ ಸಾಂಕೇತಿಕವಾಗಿ ನೀಡಲಾಯಿತು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.’ಮಹಾಭಿಯಾನ’ದ ಪ್ರಯುಕ್ತ ಅರಸಿನಮಕ್ಕಿ, ರೆಖ್ಯಾ, ಶಿಶಿಲ, ಶಿಬಾಜೆಯಲ್ಲಿ ತಂಡ ತಂಡವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ. ರಾಘವೇಂದ್ರ ನಾಯಕ್ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ರತೀಶ್ ಗೌಡ ವಂದಿಸಿದರು.

Related posts

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!