April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ


ಅರಸಿನಮಕ್ಕಿ: ಹತ್ಯಡ್ಕ ಸಹಕಾರಿ ಸಂಘದ ಚುನಾವಣೆಯು ಜ.8ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಮನೆ ಮನೆ ಪ್ರಚಾರದ ‘ಮಹಾಭಿಯಾನ’ಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಜ. 5ರಂದು ಚಾಲನೆ ನೀಡಿದರು.

ವೇದಿಕೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರಾಘವೇಂದ್ರ ನಾಯಕ್, ರಾಜು ಕೆ.ಸಾಲ್ಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ , ಮುರಳಿಧರ ಶೆಟ್ಟಿಗಾರ್, ಬೇಬಿ ಕಿರಣ್, ಕೃಷ್ಣಪ್ಪ ಗೌಡ, ಶ್ರೀಮತಿ ತಾರಾ ಚಿಪ್ಲುನ್ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್, ಶಿಶಿಲ ಗ್ರಾಪಂ ಅಧ್ಯಕ್ಷ ಸುದಿನ್ ಕೆ., ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಗಣೇಶ್ ಅರಸಿನಮಕ್ಕಿ,ಜಯಪ್ರಕಾಶ, ವಿನಯಚಂದ್ರ ಟಿ. ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಮಹಾಭಿಯಾನ’ದ ಪ್ರಚಾರದ ತಂಡಕ್ಕೆ ಬೇಕಾದ ವಿವಿಧ ವಸ್ತುಗಳನ್ನು ಕರುಣಾಕರ ಶಿಶಿಲರ ವರಿಗೆ ಸಾಂಕೇತಿಕವಾಗಿ ನೀಡಲಾಯಿತು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.’ಮಹಾಭಿಯಾನ’ದ ಪ್ರಯುಕ್ತ ಅರಸಿನಮಕ್ಕಿ, ರೆಖ್ಯಾ, ಶಿಶಿಲ, ಶಿಬಾಜೆಯಲ್ಲಿ ತಂಡ ತಂಡವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ. ರಾಘವೇಂದ್ರ ನಾಯಕ್ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ರತೀಶ್ ಗೌಡ ವಂದಿಸಿದರು.

Related posts

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya
error: Content is protected !!