25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ


ಅರಸಿನಮಕ್ಕಿ: ಹತ್ಯಡ್ಕ ಸಹಕಾರಿ ಸಂಘದ ಚುನಾವಣೆಯು ಜ.8ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಮನೆ ಮನೆ ಪ್ರಚಾರದ ‘ಮಹಾಭಿಯಾನ’ಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಜ. 5ರಂದು ಚಾಲನೆ ನೀಡಿದರು.

ವೇದಿಕೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರಾಘವೇಂದ್ರ ನಾಯಕ್, ರಾಜು ಕೆ.ಸಾಲ್ಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ , ಮುರಳಿಧರ ಶೆಟ್ಟಿಗಾರ್, ಬೇಬಿ ಕಿರಣ್, ಕೃಷ್ಣಪ್ಪ ಗೌಡ, ಶ್ರೀಮತಿ ತಾರಾ ಚಿಪ್ಲುನ್ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್, ಶಿಶಿಲ ಗ್ರಾಪಂ ಅಧ್ಯಕ್ಷ ಸುದಿನ್ ಕೆ., ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಗಣೇಶ್ ಅರಸಿನಮಕ್ಕಿ,ಜಯಪ್ರಕಾಶ, ವಿನಯಚಂದ್ರ ಟಿ. ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಮಹಾಭಿಯಾನ’ದ ಪ್ರಚಾರದ ತಂಡಕ್ಕೆ ಬೇಕಾದ ವಿವಿಧ ವಸ್ತುಗಳನ್ನು ಕರುಣಾಕರ ಶಿಶಿಲರ ವರಿಗೆ ಸಾಂಕೇತಿಕವಾಗಿ ನೀಡಲಾಯಿತು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.’ಮಹಾಭಿಯಾನ’ದ ಪ್ರಯುಕ್ತ ಅರಸಿನಮಕ್ಕಿ, ರೆಖ್ಯಾ, ಶಿಶಿಲ, ಶಿಬಾಜೆಯಲ್ಲಿ ತಂಡ ತಂಡವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ. ರಾಘವೇಂದ್ರ ನಾಯಕ್ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ರತೀಶ್ ಗೌಡ ವಂದಿಸಿದರು.

Related posts

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!