32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

ಉಜಿರೆ: ಶ್ರೀ ಧ.ಮಂ. ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕ ಭಾರತ್ ಸೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಸ್ಥಳೀಯ ಸಂಘಟನೆಗಳು ಪ್ರಸ್ತುತಪಡಿಸುವ ಪ್ರಮುಖ – 2K25 ಒಂದು ದಿನದ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವವು ಜ.6 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ ಸದಸ್ಯೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ಗೆ ಸೇರಿದ ವಿದ್ಯಾರ್ಥಿಗಳಿಗೆ ಸೇವೆಯನ್ನು ಮತ್ತು ಸಾಹಸ ಪ್ರವೃತ್ತಿಯನ್ನು ಅಳವಡಿಸಿಕೊಳ್ಳುವ ಹಾಗೂ ಗೌರವಿಸುವ ವ್ಯಕ್ತಿತ್ವ ಬೆಳೆಯುತ್ತದೆ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಕೂಡ ಅಗತ್ಯ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಮುಖ್ಯ ಅತಿಥಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಮತ್ತು ಅಲ್ಪಸಂಖ್ಯಾತ ಆಯೋಗದ ಉಪಾಧ್ಯಕ್ಷ ಅಶ್ವಿತ್ ಜೈನ್ ಟ್ರೋಫಿ ಹಾಗೂ ಮಾಡೆಲ್ ಗಳ ಅನಾವರಣಗೊಳಿಸಿದರು.

ವೇದಿಕೆಯಲ್ಲಿ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ರೋವರ್ಸ್ ಮತ್ತು ರೇಂಜರ್ಸ್ ನ ಜಿಲ್ಲಾ ಮುಖ್ಯಸ್ಥ ಮಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್ ಉಪಸ್ಥಿತರಿದ್ದರು.

ರೇಂಜರ್‌ಗಳು ಪ್ರಾರ್ಥಿಸಿದರು. ರೇಂಜರ್ ಲೀಡರ್ ಗಾನವಿ ಡಿ. ಸ್ವಾಗತಿಸಿದರು. ಭೂಮಿಕಾ ಕೆ. ಎಲ್ ಜೈನ್ ಮತ್ತು ಮಾನಸ ಅಗ್ನಿಹೋತ್ರಿ ನಿರೂಪಿಸಿದರು. ರೋವರ್ ಸೈಟ್ಸ್ ಲೀಡರ್ ಪ್ರಸಾದ್ ಕುಮಾರ್ ವಂದಿಸಿದರು.

Related posts

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya
error: Content is protected !!