23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

ಉಜಿರೆ: ಶ್ರೀ ಧ.ಮಂ. ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕ ಭಾರತ್ ಸೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಸ್ಥಳೀಯ ಸಂಘಟನೆಗಳು ಪ್ರಸ್ತುತಪಡಿಸುವ ಪ್ರಮುಖ – 2K25 ಒಂದು ದಿನದ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವವು ಜ.6 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ ಸದಸ್ಯೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ಗೆ ಸೇರಿದ ವಿದ್ಯಾರ್ಥಿಗಳಿಗೆ ಸೇವೆಯನ್ನು ಮತ್ತು ಸಾಹಸ ಪ್ರವೃತ್ತಿಯನ್ನು ಅಳವಡಿಸಿಕೊಳ್ಳುವ ಹಾಗೂ ಗೌರವಿಸುವ ವ್ಯಕ್ತಿತ್ವ ಬೆಳೆಯುತ್ತದೆ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಕೂಡ ಅಗತ್ಯ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಮುಖ್ಯ ಅತಿಥಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಮತ್ತು ಅಲ್ಪಸಂಖ್ಯಾತ ಆಯೋಗದ ಉಪಾಧ್ಯಕ್ಷ ಅಶ್ವಿತ್ ಜೈನ್ ಟ್ರೋಫಿ ಹಾಗೂ ಮಾಡೆಲ್ ಗಳ ಅನಾವರಣಗೊಳಿಸಿದರು.

ವೇದಿಕೆಯಲ್ಲಿ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ರೋವರ್ಸ್ ಮತ್ತು ರೇಂಜರ್ಸ್ ನ ಜಿಲ್ಲಾ ಮುಖ್ಯಸ್ಥ ಮಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್ ಉಪಸ್ಥಿತರಿದ್ದರು.

ರೇಂಜರ್‌ಗಳು ಪ್ರಾರ್ಥಿಸಿದರು. ರೇಂಜರ್ ಲೀಡರ್ ಗಾನವಿ ಡಿ. ಸ್ವಾಗತಿಸಿದರು. ಭೂಮಿಕಾ ಕೆ. ಎಲ್ ಜೈನ್ ಮತ್ತು ಮಾನಸ ಅಗ್ನಿಹೋತ್ರಿ ನಿರೂಪಿಸಿದರು. ರೋವರ್ ಸೈಟ್ಸ್ ಲೀಡರ್ ಪ್ರಸಾದ್ ಕುಮಾರ್ ವಂದಿಸಿದರು.

Related posts

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya
error: Content is protected !!