29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ ಸಮಸ್ಯೆಗಳ ಪರಿಶೀಲನೆ ಕುರಿತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಕಲ್ಲೇರಿ ಸಹಕಾರಿ ಸಂಘದ ಸಭಾಭವನದಲ್ಲಿ ಜ. 6ರಂದು ಜರಗಿತು.

ಕಾರ್ಯಕ್ರಮವನ್ನು ಸರಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಉದ್ಘಾಟಿಸಿದರು.


ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದರು.


ಬಾರ್ಯ ಗ್ರಾಮ ಪಂಚಾಯತಿ ಅಧ್ಯಕ್ಷ ಉಸ್ಮಾನ್, ತೆಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಯಾನತ್, ಅನುಷ್ಠಾನ ಸಮಿತಿಯ ಸದಸ್ಯರಾದ ಸೌಮ್ಯ, ಮರಿಟಾ ಪಿಂಟೋ, ನೇಮಿರಾಜ್, ವಂದನ ಭಂಡಾರಿ, ಬೆಳ್ತಂಗಡಿ ಉಪವಿಭಾಗದ ಸ.ಕಾ. ಇಂಜಿನಿಯರ್ ಕೈಮೆಂಟ್ ಬೆಂಜಮಿನ್ ಬ್ರಾಗ್ಸ್, ಸಿಡಿಪಿಒ ಪ್ರಿಯಾ ಆಗ್ನೆಸ್, ಆಹಾರ ಇಲಾಖೆ ಅಧಿಕಾರಿ ವಿಶ್ವ ಹಾಗೂ ಇತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ಪಂಚಾಯತ್ ಸಿಇಒ ಭವಾನಿ ಶಂಕರ್ ಸ್ವಾಗತಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya
error: Content is protected !!