September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ ಸಮಸ್ಯೆಗಳ ಪರಿಶೀಲನೆ ಕುರಿತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಕಲ್ಲೇರಿ ಸಹಕಾರಿ ಸಂಘದ ಸಭಾಭವನದಲ್ಲಿ ಜ. 6ರಂದು ಜರಗಿತು.

ಕಾರ್ಯಕ್ರಮವನ್ನು ಸರಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಉದ್ಘಾಟಿಸಿದರು.


ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದರು.


ಬಾರ್ಯ ಗ್ರಾಮ ಪಂಚಾಯತಿ ಅಧ್ಯಕ್ಷ ಉಸ್ಮಾನ್, ತೆಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಯಾನತ್, ಅನುಷ್ಠಾನ ಸಮಿತಿಯ ಸದಸ್ಯರಾದ ಸೌಮ್ಯ, ಮರಿಟಾ ಪಿಂಟೋ, ನೇಮಿರಾಜ್, ವಂದನ ಭಂಡಾರಿ, ಬೆಳ್ತಂಗಡಿ ಉಪವಿಭಾಗದ ಸ.ಕಾ. ಇಂಜಿನಿಯರ್ ಕೈಮೆಂಟ್ ಬೆಂಜಮಿನ್ ಬ್ರಾಗ್ಸ್, ಸಿಡಿಪಿಒ ಪ್ರಿಯಾ ಆಗ್ನೆಸ್, ಆಹಾರ ಇಲಾಖೆ ಅಧಿಕಾರಿ ವಿಶ್ವ ಹಾಗೂ ಇತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ಪಂಚಾಯತ್ ಸಿಇಒ ಭವಾನಿ ಶಂಕರ್ ಸ್ವಾಗತಿಸಿದರು.

Related posts

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!