26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-30 ರ ಸಾಲಿನ ಆಡಳಿತ ಮಂಡಳಿ ಚುನಾವಣೆ ಜ. 27 ರಂದು ನಡೆಯಲಿದ್ದು, ಬಡೆಕಾಯಿಲ್ ಉಮೇಶ್ ಗೌಡರ ಮನೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಸಹಮತದಿಂದ ಜ. 5 ರಂದು ಆಯ್ಕೆ ಮಾಡಿ ಘೋಷಿಸಲಾಯಿತು.

ಪಟ್ರಮೆ ಶಕ್ತಿ ಕೇಂದ್ರ ಪ್ರಮುಖ್ ಮನೋಜ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಲ ಪ್ರಭಾರಿ ಪ್ರೀತಮ್ ಡಿ. ಧರ್ಮಸ್ಥಳ, ಡಿ. ಸಿ. ಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಎಸ್. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಮಂಡಲ ಸ್ತರದ ಪ್ರಮುಖರು ಬೂತ್ ಅಧ್ಯಕ್ಷರುಗಳಾದ ಕಿರಣ್, ಶಶಿ ಕುಮಾರ್, ಲಿಂಗಪ್ಪ ಗೌಡ, ಕಮಲಾಕ್ಷ ಗುಂಡಿಲೇ, ಕಾರ್ಯದರ್ಶಿಗಳಾದ ರವಿಚಂದ್ರ, ಶ್ರೀಧರ್ ಡಿ. ಕೆ. ಕಿಶೋರ್ ಪೋಯ್ಯೋಲೆ ಮತ್ತು ಕೊಕ್ಕಡ- ಪಟ್ರಮೆ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಬೆಳ್ತಂಗಡಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ ಸಹಕಾರ ಭಾರತೀಯ 12 ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಅಭ್ಯರ್ಥಿಗಳಾಗಿ ಕುಶಾಲಪ್ಪ ಗೌಡ ಪೂವಾಜೆ, ವಿಠಲ್ ಭಂಡಾರಿ, ವಿಶ್ವನಾಥ್ ಕಕ್ಕುದೋಲಿ, ಪದ್ಮನಾಭ ಕಾಯಿಲ, ಪ್ರೇಮಾವತಿ ಕಲ್ಲಾಜೆ, ಶ್ರೀನಾಥ್ ಬಡೆಕಾಯಿಲ್, ಸುನಿಲ್ ಕೊಲ್ಲಾಜೆ, ಉದಯ್ ರಾವ್ ಅನಾ‌ರು, ಮಹಾಬಲ ಶೆಟ್ಟಿ ಪರತ್ತಿಮಾರು ಪಟ್ಟೂರು, ಅಶ್ವಿನಿ ರವಿ ನಾಯ್ಕ ಓಣಿತ್ತಾರ್, ಮುತ್ತಪ್ಪ ಕೊಕ್ಕಡ, ರವಿಚಂದ್ರ ಪುಡಿಕೆತ್ತೂರ್ ಮುಂತಾದ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ.

Related posts

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!