30.2 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

ಮಂಗಳೂರು : ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ವಲಯದ ಭಕ್ತರ ಸಮಾಲೋಚನಾ ಸಭೆಯು ಕಂಕನಾಡಿ ಗರಡಿಯ ಸರ್ವಮಂಗಳ ಹಾಲ್ ನಲ್ಲಿ ಜರಗಿತು.


ಪ್ರಾಸ್ತಾವಿಕವಾಗಿ ಮಾತನಾಡಿದ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿಯವರು ತುಳುನಾಡಿನ ಧಾರ್ಮಿಕ ಪರಂಪರೆಯಲ್ಲಿ ಬ್ರಹ್ಮಕಲಶ ಮತ್ತು ಹೊರೆಕಾಣಿಕೆಯಲ್ಲಿ ಇತಿಹಾಸವನ್ನು ಸೃಷ್ಟಿಸಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯನ್ನು ವಿಶ್ವದ ಬಿಲ್ಲವರು ಎಲ್ಲಾ ಒಂದಾಗಿ ಸೇರಿ ತಮ್ಮ ಸಂಘಟನೆಗಳ ಮೂಲಕ ಸಂಘಟಿತರಾಗಿ ನಿರ್ಮಿಸಿದ್ದಾರೆ, ಶ್ರೀ ಕ್ಷೇತ್ರ ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿದೆ. ಕ್ಷೇತ್ರದಲ್ಲಿ ಮಹಾ ಮಾತೆ ದೇಯಿ ಬೈದೆತಿ ಅಭಯ ಧಾತೆಯಾಗಿ ಜನರ ಕಷ್ಟಗಳನ್ನು ನಿವಾರಿಸುವ ಜೊತೆ ಮಹಾ ಮಾತೆಯ ಸಂಕಲ್ಪದಂತೆ ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಮ್ಮನ ಮಡಿಲ ಪ್ರಸಾದವನ್ನು ಸ್ವೀಕರಿಸುವ ಹಾಗೆ ಜಾತ್ರಾ ಮಹೋತ್ಸವ ಸಂಧರ್ಭದಲ್ಲಿ ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು. ಮಹಾ ಮಾತೆಗೆ ಅರ್ಪಿತವಾಗುವ ವಸ್ತ್ರಾಧಿಗಳನ್ನು ಕೋಟಿ ಚೆನ್ನಯರು ಕೂಡ ಬಹಳ ಸಂತೋಷ ದಿಂದ ಸ್ವೀಕರಿಸುತ್ತಾರೆ ಎಂದು ಪ್ರಶ್ನಾ ಚಿಂತನೆಯ ವಿಷಯವನ್ನು ತಿಳಿಸಿ ಭಕ್ತಾದಿಗಳಿಗೆ ಮಾತೃ ವಾತ್ಸಲ್ಯ ಕಾರುಣ್ಯ ಮೂರ್ತಿಯ ಅನುಗ್ರಹವಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಕ್ಷೇತ್ರದ ಕಾರಣಿಕ ಮತ್ತು ದೈವಿಕತೆಯ ಅನುಭವಗಳನ್ನು ವಿವರಿಸಿದರು. ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷೆಯಾದ ಶ್ರೀಮತಿ ವಿದ್ಯಾ ರಾಕೇಶ್ ಇವರು ಮಾತೃ ಸಂಕಲ್ಪ ಮತ್ತು ಅಮ್ಮನ ಮಡಿಲ ಪ್ರಸಾದ ಬಗ್ಗೆ ವಿವರಿಸಿದರು.

ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಅಧ್ಯಕ್ಷರು ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಕ್ಷೇತ್ರದ ಟ್ರಸ್ಟಿ ಶೈಲೇಂದ್ರ ವೈ ಸುವರ್ಣ,ನಗರ ಪಾಲಿಕೆ ವಿಪಕ್ಷ ನಾಯಕ ಅನಿಲ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕುಮಾರ್, ಟ್ರಸ್ಟಿಗಳಾದ ಚಂದ್ರಶೇಖರ್ ಉಚ್ಚಿಲ್, ನಾರಾಯಣ ಮಚ್ಚಿನ, ಜಯಾನಂದ ಎಂ , ಮೋಹನ್ ದಾಸ್ ವಾಮಂಜೂರು ಹಾಗೂ ಮಹಿಳಾ ಪ್ರಮುಖರಾದ ಚಂಚಲ ತೇಜೋಮಯ, ದೀಪಿಕಾ, ಹೇಮಾ ನಿಸರ್ಗ, ರೇಖಾ, ಅಮಿತ ಮುಂತಾದವರು ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಬಿಲ್ಲವ ಸಂಘ, ಶ್ರೀ ನಾರಾಯಣ ಗುರು ಸಂಘಗಳ ಪ್ರಮುಖರು, ಯುವವಾಹಿನಿ, ಬಿರುವೆರ್ ಕುಡ್ಲ,ಹಾಗೂ ಮಹಿಳಾ ಸಂಘಗಳ ಪ್ರಮುಖರು ಭಾಗವಹಿಸಿದ್ದರು.

Related posts

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!