23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಜನವರಿ 4ರಂದು ಶಾಲಾ ವಾರ್ಷಿಕೋತ್ಸವವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನೆರವೇರಿತು.


ಮುಖ್ಯ ಅತಿಥಿಗಳಾದ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತರಾದ ಭುಜಬಲಿಯವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶ್ರೀ ಧ .ಮಂ.ಎಜುಕೇಶನ್ ಟ್ರಸ್ಟ್ ಉಜಿರೆ ಇದರ ಕಾರ್ಯದರ್ಶಿಗಳಾದ ಸತೀಶ್ ಚಂದ್ರ ಹಾಗೂ ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದರು.


ಪೂಜ್ಯ ಡಾ. ಡಿ .ವೀರೇಂದ್ರ ಹೆಗಡೆ , ಡಿ ಹರ್ಷೇಂದ್ರ ಕುಮಾರ್ ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಇವರು ಶಾಲಾ ಸಂಚಿಕೆ ‘ಭಾರತಿ’ಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಂತರ ವಿದ್ಯಾರ್ಥಿಗಳಿಂದ ಯಕ್ಷಗಾನ ,ಭರತನಾಟ್ಯ ,ಸಂಗೀತ ಹಾಗೂ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ಜರಗಿದವು.
ವೇದಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾಗಿರುವ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರನ್ನು ಸನ್ಮಾನಿಸಲಾಯಿತು.


ಶಾಲಾ ವಾರ್ಷಿಕ ವರದಿಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಾಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಯನ್ನು ಶ್ರೀಮತಿ ಪೂರ್ಣಿಮಾ ಜೋಷಿ ಹಾಗೂ ಶ್ರೀಮತಿ ಶ್ರೀಜಾ ಎ ನೆರವೇರಿಸಿದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya
error: Content is protected !!