25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!