September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya
error: Content is protected !!