25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

ಬೆಳ್ತಂಗಡಿ: ಮಡಂತ್ಯಾರು ಯುನಿಯನ್ ಬ್ಯಾಂಕಿನ ಅತ್ಯಂತ ಜನಸ್ನೇಹಿ ಮ್ಯಾನೇಜರಾಗಿದ್ದು ಇದೀಗ ವರ್ಗಾವಣೆಗೊಂಡಿರುವ ಅಶೋಕ್ ಕೋಟ್ಯಾನ್ ಉಡುಪಿ ಅವರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸಹಕಾರಿ ಸಂಘಕ್ಕೆ ಕೇವಲ 11 ಸೆಂಟ್ಸ್ ಜಾಗದಲ್ಲಿ ಅತ್ಯಪೂರ್ವ ಕಟ್ಟಡ ನಿರ್ಮಿಸಿ ಮಾದರಿ ಆಡಳಿತಗಾರನೆನಿಸಿದ ಸಹಕಾರಿ ಸಂಘದ ಅಧ್ಯಕ್ಷ ಅರವಿಂದ ಜೈನ್, ಸಿಇಒ ಜೋಕಿಂ ಡಿಸೋಜ ಅವರಿಗೆ ಸನ್ಮಾನ ಕಾರ್ಯಕ್ರಮ ಜ.4 ರಂದು ಮಡಂತ್ಯಾರಿನ ದುರ್ಗಾ ಹೊಟೇಲ್ ಆವರಣದಲ್ಲಿ ನಡೆಯಿತು.

ವಿಶೇಷವೆಂದರೆ ಮಾಲಾಡಿ ಗ್ರಾಮದ ಕೊಲ್ಪೆದಬೈಲು ನಿವಾಸಿ ಹಿರಿಯ ಸಾಮಾಜಿಕ ಮುತ್ಸದ್ದಿ ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ಅವರು ವೈಯುಕ್ತಿಕ ನೆಲೆಯಲ್ಲಿ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ಹಮ್ಮಿಕೊಂಡಿದ್ದರು.

ಲೆತೀಫ್ ಸಾಹೇಬ್ ಅವರು ಸ್ವ ಇಚ್ಛೆಯಿಂದ ಪ್ರತೀ ವರ್ಷ ಮಡಂತ್ಯಾರು ಆಸುಪಾಸಿನ ಕರ್ಣಾಟಕ ಬ್ಯಾಂಕ್, ಯೂನಿಯನ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಮತ್ತು ಮಡಂತ್ಯಾರು ಕೃಷಿಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕು ಮತ್ತು ಸಿಬ್ಬಂದಿಗಳನ್ನು ಆಹ್ವಾನಿಸಿ ಅವರಿಗೆ ಔತಣಕೂಟವನ್ನೂ ನಡೆಸಿಕೊಂಡು ಬರುತ್ತಿದ್ದಾರೆ.
ಜ.4 ರಂದು ನಡೆದ ಕಾರ್ಯಕ್ರಮದಲ್ಲಿ ಹಾಜಿ ಅಬ್ದುಲ್‌ ಲೆತೀಫ್ ಸಾಹೇಬ್ ಅವರೇ ಸನ್ಮಾನಿತರ ಬಗ್ಗೆ ಅಭಿನಂದನಾ ಮಾತುಗಳನ್ನಾಡಿದರು.


ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮುಖ್ಯ ಅತಿಥಿಯಾಗಿದ್ದು ಸಂದರ್ಭೋಚಿತವಾಗಿ ಶುಭಕೋರಿದರು.
ಸಮಾರಂಭದಲ್ಲಿ ಮಾಲಾಡಿ ಗ್ರಾ.ಪಂ ಪಿಡಿಒ ರಾಜಶೇಖರ ಶೆಟ್ಟಿ, ಕರ್ಣಾಟಕ ಬ್ಯಾಂಕ್ ಕೊಲ್ಪೆದಬೈಲು ಶಾಖೆಯ ಮೆನೇಜರ್ ಪದ್ಮಪ್ರಸಾದ ಆಳ್ವ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಕುಮಾರ್ ನಾಯ್ಕ್, ಡಿಸಿಸಿ ಬ್ಯಾಂಕ್ ಮಡಂತ್ಯಾರು ಶಾಖೆಯ ಮೆನೇಜರ್ ಸೌಮ್ಯಾ, ಎಜಿಎಮ್ ಶೇಖ್ ಇನಾಯತುಲ್ಲಾ, ಅಬ್ದುಲ್ ಲೆತೀಫ್ ಸಾಹೇಬ್ ಅವರ ಸಹೋದರ ಶೇಖ್ ಜವಾಹರ್ ಅಲಿ, ಇಂಜಿನಿಯರ್ ಮುಸ್ತಫಾ, ಜಿ.ಪಂ ಮಾಜಿ ಸದಸ್ಯೆ ತುಳಸಿ ಹಾರಬೆ, ಮಡಂತ್ಯಾರಿನ ಹಿರಿಯ ಗಣ್ಯ ವ್ಯಕ್ತಿ ಅನಿಲ್ ಅಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.

ಸಮಾಜ ಸೇವಕ ಅಬ್ಬೋನು ಮದ್ದಡ್ಕ ಕಾರ್ಯಕ್ರಮ ಸಂಯೋಜಿಸಿದರು. ಸಹಕಾರಿ ಸಂಘದ ಮಾಜಿ ನಿರ್ದೇಶಕ ಅಬ್ದುಲ್ ರಹಿಮಾನ್ ಪಡ್ಪು ಧನ್ಯವಾದವಿತ್ತರು.

Related posts

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya
error: Content is protected !!