25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!