24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya
error: Content is protected !!