July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!