July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು ನಡೆಯಿತು.

ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Related posts

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!