April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ ಸಮಸ್ಯೆಗಳ ಪರಿಶೀಲನೆ ಕುರಿತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಕಲ್ಲೇರಿ ಸಹಕಾರಿ ಸಂಘದ ಸಭಾಭವನದಲ್ಲಿ ಜ. 6ರಂದು ಜರಗಿತು.

ಕಾರ್ಯಕ್ರಮವನ್ನು ಸರಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಉದ್ಘಾಟಿಸಿದರು.


ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದರು.


ಬಾರ್ಯ ಗ್ರಾಮ ಪಂಚಾಯತಿ ಅಧ್ಯಕ್ಷ ಉಸ್ಮಾನ್, ತೆಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಯಾನತ್, ಅನುಷ್ಠಾನ ಸಮಿತಿಯ ಸದಸ್ಯರಾದ ಸೌಮ್ಯ, ಮರಿಟಾ ಪಿಂಟೋ, ನೇಮಿರಾಜ್, ವಂದನ ಭಂಡಾರಿ, ಬೆಳ್ತಂಗಡಿ ಉಪವಿಭಾಗದ ಸ.ಕಾ. ಇಂಜಿನಿಯರ್ ಕೈಮೆಂಟ್ ಬೆಂಜಮಿನ್ ಬ್ರಾಗ್ಸ್, ಸಿಡಿಪಿಒ ಪ್ರಿಯಾ ಆಗ್ನೆಸ್, ಆಹಾರ ಇಲಾಖೆ ಅಧಿಕಾರಿ ವಿಶ್ವ ಹಾಗೂ ಇತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ಪಂಚಾಯತ್ ಸಿಇಒ ಭವಾನಿ ಶಂಕರ್ ಸ್ವಾಗತಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!