September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-30 ರ ಸಾಲಿನ ಆಡಳಿತ ಮಂಡಳಿ ಚುನಾವಣೆ ಜ. 27 ರಂದು ನಡೆಯಲಿದ್ದು, ಬಡೆಕಾಯಿಲ್ ಉಮೇಶ್ ಗೌಡರ ಮನೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಸಹಮತದಿಂದ ಜ. 5 ರಂದು ಆಯ್ಕೆ ಮಾಡಿ ಘೋಷಿಸಲಾಯಿತು.

ಪಟ್ರಮೆ ಶಕ್ತಿ ಕೇಂದ್ರ ಪ್ರಮುಖ್ ಮನೋಜ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಲ ಪ್ರಭಾರಿ ಪ್ರೀತಮ್ ಡಿ. ಧರ್ಮಸ್ಥಳ, ಡಿ. ಸಿ. ಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಎಸ್. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಮಂಡಲ ಸ್ತರದ ಪ್ರಮುಖರು ಬೂತ್ ಅಧ್ಯಕ್ಷರುಗಳಾದ ಕಿರಣ್, ಶಶಿ ಕುಮಾರ್, ಲಿಂಗಪ್ಪ ಗೌಡ, ಕಮಲಾಕ್ಷ ಗುಂಡಿಲೇ, ಕಾರ್ಯದರ್ಶಿಗಳಾದ ರವಿಚಂದ್ರ, ಶ್ರೀಧರ್ ಡಿ. ಕೆ. ಕಿಶೋರ್ ಪೋಯ್ಯೋಲೆ ಮತ್ತು ಕೊಕ್ಕಡ- ಪಟ್ರಮೆ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಬೆಳ್ತಂಗಡಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ ಸಹಕಾರ ಭಾರತೀಯ 12 ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಅಭ್ಯರ್ಥಿಗಳಾಗಿ ಕುಶಾಲಪ್ಪ ಗೌಡ ಪೂವಾಜೆ, ವಿಠಲ್ ಭಂಡಾರಿ, ವಿಶ್ವನಾಥ್ ಕಕ್ಕುದೋಲಿ, ಪದ್ಮನಾಭ ಕಾಯಿಲ, ಪ್ರೇಮಾವತಿ ಕಲ್ಲಾಜೆ, ಶ್ರೀನಾಥ್ ಬಡೆಕಾಯಿಲ್, ಸುನಿಲ್ ಕೊಲ್ಲಾಜೆ, ಉದಯ್ ರಾವ್ ಅನಾ‌ರು, ಮಹಾಬಲ ಶೆಟ್ಟಿ ಪರತ್ತಿಮಾರು ಪಟ್ಟೂರು, ಅಶ್ವಿನಿ ರವಿ ನಾಯ್ಕ ಓಣಿತ್ತಾರ್, ಮುತ್ತಪ್ಪ ಕೊಕ್ಕಡ, ರವಿಚಂದ್ರ ಪುಡಿಕೆತ್ತೂರ್ ಮುಂತಾದ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ.

Related posts

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!