September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya
error: Content is protected !!