25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!