September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya
error: Content is protected !!