23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!