25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
error: Content is protected !!