22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

ಉಜಿರೆ: ಶ್ರೀ ಧ.ಮಂ. ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕ ಭಾರತ್ ಸೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಸ್ಥಳೀಯ ಸಂಘಟನೆಗಳು ಪ್ರಸ್ತುತಪಡಿಸುವ ಪ್ರಮುಖ – 2K25 ಒಂದು ದಿನದ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವವು ಜ.6 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ ಸದಸ್ಯೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ಗೆ ಸೇರಿದ ವಿದ್ಯಾರ್ಥಿಗಳಿಗೆ ಸೇವೆಯನ್ನು ಮತ್ತು ಸಾಹಸ ಪ್ರವೃತ್ತಿಯನ್ನು ಅಳವಡಿಸಿಕೊಳ್ಳುವ ಹಾಗೂ ಗೌರವಿಸುವ ವ್ಯಕ್ತಿತ್ವ ಬೆಳೆಯುತ್ತದೆ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಕೂಡ ಅಗತ್ಯ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಮುಖ್ಯ ಅತಿಥಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಮತ್ತು ಅಲ್ಪಸಂಖ್ಯಾತ ಆಯೋಗದ ಉಪಾಧ್ಯಕ್ಷ ಅಶ್ವಿತ್ ಜೈನ್ ಟ್ರೋಫಿ ಹಾಗೂ ಮಾಡೆಲ್ ಗಳ ಅನಾವರಣಗೊಳಿಸಿದರು.

ವೇದಿಕೆಯಲ್ಲಿ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ರೋವರ್ಸ್ ಮತ್ತು ರೇಂಜರ್ಸ್ ನ ಜಿಲ್ಲಾ ಮುಖ್ಯಸ್ಥ ಮಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್ ಉಪಸ್ಥಿತರಿದ್ದರು.

ರೇಂಜರ್‌ಗಳು ಪ್ರಾರ್ಥಿಸಿದರು. ರೇಂಜರ್ ಲೀಡರ್ ಗಾನವಿ ಡಿ. ಸ್ವಾಗತಿಸಿದರು. ಭೂಮಿಕಾ ಕೆ. ಎಲ್ ಜೈನ್ ಮತ್ತು ಮಾನಸ ಅಗ್ನಿಹೋತ್ರಿ ನಿರೂಪಿಸಿದರು. ರೋವರ್ ಸೈಟ್ಸ್ ಲೀಡರ್ ಪ್ರಸಾದ್ ಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
error: Content is protected !!