24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-30 ರ ಸಾಲಿನ ಆಡಳಿತ ಮಂಡಳಿ ಚುನಾವಣೆ ಜ. 27 ರಂದು ನಡೆಯಲಿದ್ದು, ಬಡೆಕಾಯಿಲ್ ಉಮೇಶ್ ಗೌಡರ ಮನೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಸಹಮತದಿಂದ ಜ. 5 ರಂದು ಆಯ್ಕೆ ಮಾಡಿ ಘೋಷಿಸಲಾಯಿತು.

ಪಟ್ರಮೆ ಶಕ್ತಿ ಕೇಂದ್ರ ಪ್ರಮುಖ್ ಮನೋಜ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಲ ಪ್ರಭಾರಿ ಪ್ರೀತಮ್ ಡಿ. ಧರ್ಮಸ್ಥಳ, ಡಿ. ಸಿ. ಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಎಸ್. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಮಂಡಲ ಸ್ತರದ ಪ್ರಮುಖರು ಬೂತ್ ಅಧ್ಯಕ್ಷರುಗಳಾದ ಕಿರಣ್, ಶಶಿ ಕುಮಾರ್, ಲಿಂಗಪ್ಪ ಗೌಡ, ಕಮಲಾಕ್ಷ ಗುಂಡಿಲೇ, ಕಾರ್ಯದರ್ಶಿಗಳಾದ ರವಿಚಂದ್ರ, ಶ್ರೀಧರ್ ಡಿ. ಕೆ. ಕಿಶೋರ್ ಪೋಯ್ಯೋಲೆ ಮತ್ತು ಕೊಕ್ಕಡ- ಪಟ್ರಮೆ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಬೆಳ್ತಂಗಡಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ ಸಹಕಾರ ಭಾರತೀಯ 12 ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಅಭ್ಯರ್ಥಿಗಳಾಗಿ ಕುಶಾಲಪ್ಪ ಗೌಡ ಪೂವಾಜೆ, ವಿಠಲ್ ಭಂಡಾರಿ, ವಿಶ್ವನಾಥ್ ಕಕ್ಕುದೋಲಿ, ಪದ್ಮನಾಭ ಕಾಯಿಲ, ಪ್ರೇಮಾವತಿ ಕಲ್ಲಾಜೆ, ಶ್ರೀನಾಥ್ ಬಡೆಕಾಯಿಲ್, ಸುನಿಲ್ ಕೊಲ್ಲಾಜೆ, ಉದಯ್ ರಾವ್ ಅನಾ‌ರು, ಮಹಾಬಲ ಶೆಟ್ಟಿ ಪರತ್ತಿಮಾರು ಪಟ್ಟೂರು, ಅಶ್ವಿನಿ ರವಿ ನಾಯ್ಕ ಓಣಿತ್ತಾರ್, ಮುತ್ತಪ್ಪ ಕೊಕ್ಕಡ, ರವಿಚಂದ್ರ ಪುಡಿಕೆತ್ತೂರ್ ಮುಂತಾದ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!