30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಜನವರಿ 4ರಂದು ಶಾಲಾ ವಾರ್ಷಿಕೋತ್ಸವವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನೆರವೇರಿತು.


ಮುಖ್ಯ ಅತಿಥಿಗಳಾದ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತರಾದ ಭುಜಬಲಿಯವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶ್ರೀ ಧ .ಮಂ.ಎಜುಕೇಶನ್ ಟ್ರಸ್ಟ್ ಉಜಿರೆ ಇದರ ಕಾರ್ಯದರ್ಶಿಗಳಾದ ಸತೀಶ್ ಚಂದ್ರ ಹಾಗೂ ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದರು.


ಪೂಜ್ಯ ಡಾ. ಡಿ .ವೀರೇಂದ್ರ ಹೆಗಡೆ , ಡಿ ಹರ್ಷೇಂದ್ರ ಕುಮಾರ್ ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಇವರು ಶಾಲಾ ಸಂಚಿಕೆ ‘ಭಾರತಿ’ಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಂತರ ವಿದ್ಯಾರ್ಥಿಗಳಿಂದ ಯಕ್ಷಗಾನ ,ಭರತನಾಟ್ಯ ,ಸಂಗೀತ ಹಾಗೂ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ಜರಗಿದವು.
ವೇದಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾಗಿರುವ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರನ್ನು ಸನ್ಮಾನಿಸಲಾಯಿತು.


ಶಾಲಾ ವಾರ್ಷಿಕ ವರದಿಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಾಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಯನ್ನು ಶ್ರೀಮತಿ ಪೂರ್ಣಿಮಾ ಜೋಷಿ ಹಾಗೂ ಶ್ರೀಮತಿ ಶ್ರೀಜಾ ಎ ನೆರವೇರಿಸಿದರು.

Related posts

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya
error: Content is protected !!