29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!