September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!