25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ ತಯಾರಿಸಿದ ಜ್ಯೂಸ್ ,ತಿಂಡಿ ತಿನಿಸುಗಳು, ತಂಪು ಪಾನೀಯ, ಪಾನಿಪುರಿ ಇತ್ಯಾದಿಗಳನ್ನು ಸುಮಾರು 15 ಪುಟ್ಟ ಅಂಗಡಿಗಳಲ್ಲಿ ಜೋಡಿಸಿ ಉತ್ಸಾಹದಿಂದ ಮಾರಾಟ ಮಾಡಿದರು.

ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅಳತೆ ಹಾಗೂ ಅಂದಾಜುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಮೆಟ್ರಿಕ್ ಮೇಳದ ಯಶಸ್ವಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯ ಕಾರಣೀಭೂತರಾದರು. ನೈಜ ವಸ್ತು ಮತ್ತು ನೈಜ ಹಣಕಾಸಿನ ವ್ಯವಹಾರದಿಂದ ವಿದ್ಯಾರ್ಥಿಗಳೆಲ್ಲರೂ ಸಂತೋಷಗೊಂಡರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಸ್ ರವರು ನೆರೆದವರೆಲ್ಲರನ್ನು ಸ್ವಾಗತಿಸಿದರು .ಗಣಿತ ಶಿಕ್ಷಕಿ ಕುಮಾರಿ ದೇವಿಕಾರವರು ಪ್ರಾಯೋಗಿಕವಾಗಿ ವ್ಯವಹಾರದಲ್ಲಿ ಆಗುವ ಲಾಭ, ನಷ್ಟ ,ರಿಯಾಯಿತಿಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಮ್. ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ವಂದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya
error: Content is protected !!