July 23, 2026
Uncategorized

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

ಕುವೆಟ್ಟು: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಇದರ ಪ್ರಥಮ ಶಾಖೆಯ ಉದ್ಘಾಟನೆಯು ಜ.05 ರಂದು ವಿಶ್ರುತ್ ಕಾಂಪ್ಲೆಕ್ಸ್ ಮದ್ದಡ್ಕದಲ್ಲಿ ನಡೆಯಿತು.

ಉದ್ಘಾಟಕರಾಗಿ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಗಮಿಸಿ ನಾವು ಸದಸ್ಯರಲ್ಲಿ ಪ್ರೀತಿ ವಿಶ್ವಾಸ ನಂಬಿಕೆಯನ್ನು ಗಳಿಸಿಕೊಳ್ಳಬೇಕು. ಇದೊಂದು ಇದ್ದರೆ ಶಾಖೆಯನ್ನು ಇನ್ನು ಎತ್ತರಕ್ಕೆ ಬೆಳೆಸಬಹುದು. ಜಾತಿ ಭೇದವೆನ್ನದೆ ಉತ್ತಮವಾದ ಸೇವೆಯನ್ನು ನೀಡಿ ಈ ಶಾಖೆಯು ಇನ್ನು ಎತ್ತರಕ್ಕೆ ಏರಿ ಹೆಮ್ಮರವಾಗಿ ಬೆಳೆಯಲಿ ಎಂದು ಆಶೀರ್ವಚಿಸಿದರು.

ದಿವ್ಯ ಉಪಸ್ಥಿತಿಯಲ್ಲಿದ್ದ ಶ್ರೀ ಶೀಮುಕ್ತಾನಂದ ಸ್ವಾಮೀಜಿಯವರು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಲ್ಲಿ ಸಂಸ್ಥೆಯು ಯಶಸ್ವಿಯನ್ನು ಹೊಂದಲು ಸಾಧ್ಯ ಎಂದು ಆಶೀರ್ವಚಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗುರುಪ್ರಸಾದ್ ಬಂಗೇರ, ಪ್ರಾಂತೀಯ ಅಧಿಕಾರಿ, ಮೈಸೂರ್ ಪ್ರಾಂತ್ಯ ಇವರು ಸಂಸ್ಥೆಯು ನಗು ಮುಖದ ಸೇವೆಯನ್ನು ನೀಡುತ್ತಿರುವುದರಿಂದ ಶಾಖೆಯನ್ನು ತೆರೆಯಲು ಸಾಧ್ಯವಾಯಿತು ಎಂದು ತಿಳಿಸಿರುತ್ತಾರೆ.

ಅಧ್ಯಕ್ಷ ಸ್ಥಾನವನ್ನು ವಹಿಸಿದ ಸುಧಾಕರ್ ನೂಯಿ ಇವರು ಶಾಖೆಯಲ್ಲಿ ಶಿಬಿರವನ್ನು ಏರ್ಪಡಿಸುವ ಬಗ್ಗೆ ಪ್ರಸ್ತಾಪ ಮಾಡಿರುತ್ತಾರೆ. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್.ಶೆಟ್ಟಿ , ಮಂಗಳೂರು ಜಿಲ್ಲಾ ಸೌಹಾರ್ದಗಳ ಒಕ್ಕೂಟ ಅಧ್ಯಕ್ಷ ಭಾಸ್ಕರ ದೇವಸ್ಯ, ಕೆ.ಶ್ರೀಪತಿ ಭಟ್ಸ್ ಉದ್ಯಮಿಗಳು ಮೂಡಬಿದ್ರೆ, ಗಂಗಾಧರ ಭಟ್ ಕೆವುದೇಲು ಮದ್ದಡ್ಕ, ಹರಿದಾಸ್ ಕೆ ಮಾಲಕರು ವಿಶ್ರುತ್ ಕಾಂಪ್ಲೆಕ್ಸ್ ಮದ್ದಡ್ಕ, ಬೆಳ್ತಂಗಡಿ ಜಮಯ್ಯತುಲ್ ಪಲಾಹ್ ಘಟಕ ಕೋಶಾಧಿಕಾರಿ ಅಬ್ಬೋನ್, ಕುಸುಮ ಕರಿಂಜೆ, ಚೇತನ್ ಜಿಲ್ಲಾ ಒಕ್ಕೂಟ ಸಿಇಓ ಭಾಗವಹಿಸಿದ್ದರು. ಗ್ರಾಮ ಸಮೃದ್ಧಿಯ ಅಧ್ಯಕ್ಷರು ಸ್ವಾಗತಿಸಿ ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿವರ್ಗ ಹಾಜರಿದ್ದರು. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಿಇಓ ಶ್ರೀಮತಿ ಶಶಿಕಲಾ ವಂದಿಸಿದರು.

Related posts

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya
error: Content is protected !!