29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!