22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya
error: Content is protected !!