25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!