April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!