25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya
error: Content is protected !!