September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!