July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್.ಬಿ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ ( ಚಿತ್ರವಾಹನ ) ಜಯರಾಮ ಬಲ್ಯ ( ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್ ಪಿ ಸುರತ್ಕಲ್ (ಅರ್ಜುನ ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶ್ರದ್ಧಾಂಜಲಿ ಅರ್ಪಿಸಿದರು .
ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಹೆತ್ತವರಿಗೂ, ಕಲಾಕ್ಷೇತ್ರಕ್ಕೂ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು. ಮೃತರ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

Related posts

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!